Cow dies after being hit by safari vehicle
ಹನೂರು : ರಸ್ತೆಯಲ್ಲಿ ಹೋಗುತ್ತಿದ್ದ ಹಸುವಿಗೆ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಲೊಕ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಆಂಡಿಪಾಳ್ಯ ಗ್ರಾಮದ ಬಳಿ ನಾಗರಾಜು ಎಂಬುವವರಿಗೆ ಸೇರಿದ ಹಸು ಬೆಳಿಗ್ಗೆ 10 ಗಂಟೆಯ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಸು ಸ್ಥಳದಲ್ಲಿಯೇ ಮೃತಪಟ್ಟಿದೆ. ಆದರೂ ಸ್ಥಳಕ್ಕೆ ಅರಣ್ಯ ಇಲಾಖೆಯ ಯಾವೊಬ್ಬ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಿಲ್ಲ ಎಂದು ಹಸುವಿನ ಮಾಲೀಕರು ಹಾಗೂ ಗ್ರಾಮಸ್ಥರು ಆರೋಪಿಸಿ ಸಫಾರಿ ವಾಹನವನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ನಂತರ ಹಸುವಿನ ಮಾಲೀಕ ನಾಗರಾಜು ಮಾತನಾಡಿ, ಸಾಮಾನ್ಯ ಜನರು ವನ್ಯಪ್ರಾಣಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದರೆ ಅವರ ಮೇಲೆ ಪ್ರಕರಣ ದಾಖಲು ಮಾಡುತ್ತೀರಾ, ಆದರೆ ಹಸು ಸತ್ತು ಆರು ಗಂಟೆಯಾದರೂ ಯಾವೊಬ್ಬ ಅಧಿಕಾರಿಯೂ ಬಂದಿಲ್ಲ. ಕಾನೂನು ನಿಮಗೆ ಒಂದು ನಮಗೆ ಒಂದು ಇದೆಯೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ನೀಡಬೇಕು, ಚಾಲಕನ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…