ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದುಹಾಕಿದ್ದು, ಮತ್ತೊಂದು ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನಿನಲ್ಲಿ ಹಸು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು ಮಂಚಹಳ್ಳಿ-ಸಾವಕನಹಳ್ಳಿ ಪಾಳ್ಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಗಳ ದಾಳಿಯಿಂದ ನಲುಗಿದ್ದ ಗ್ರಾಮಸ್ಥರಿಗೆ ಈಗ ಹುಲಿ ದಾಳಿಯ ಭಯ ಆರಂಭವಾಗಿದ್ದು, ಜನರು ಹೊರಗೆ ಓಡಾಡಲು ಭಯಪಡುವಂತಾಗಿದೆ.
ಇದನ್ನೂ ಓದಿ:-ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ
3 ದಿನಗಳ ಹಿಂದೆ ಓಂಕಾರ ಅರಣ್ಯ ವಲಯದ ಕಚೇರಿಗೆ ತೆರಳಿ ಹುಲಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಬಂದಿದ್ದೆವು. ಅವರು ತಕ್ಷಣ ಕೂಂಬಿಂಗ್ ಮಾಡಿ ಹುಲಿಯನ್ನು ನಿಯಂತ್ರಿಸಿದ್ದರೆ ಇಂದು ಮಂಚಳ್ಳಿಯಲ್ಲಿ ಎರಡು ಹಸುಗಳ ಪ್ರಾಣ ಉಳಿಯುತ್ತಿತ್ತು. ಈಗ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.
ಅರಣ್ಯ ಇಲಾಖೆಯಿಂದ ಕೂಂಬಿಂಗ್ ನಡೆಸುತ್ತಿದ್ದು ಹುಲಿಯೋ, ಚಿರತೆಯೋ ಎಂಬ ಕುರಿತು ಅನುಮಾನವಿದೆ. ಒಂದು ಹಸು ಮೃತಪಟ್ಟಿದ್ದು, ಮತ್ತೊಂದು ಜೀವಂತವಾಗಿದೆ. ಜನರು ಕೂಂಬಿಂಗ್ಗೆ ಸಹಕರಿಸಬೇಕು ಎಂದು ಓಂಕಾರ್ ವಲಯಾಧಿಕಾರಿ ಹನುಮಂತಪ್ಪ ತಿಳಿಸಿದರು.
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…