ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದುಹಾಕಿದ್ದು, ಮತ್ತೊಂದು ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನಿನಲ್ಲಿ ಹಸು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು ಮಂಚಹಳ್ಳಿ-ಸಾವಕನಹಳ್ಳಿ ಪಾಳ್ಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಗಳ ದಾಳಿಯಿಂದ ನಲುಗಿದ್ದ ಗ್ರಾಮಸ್ಥರಿಗೆ ಈಗ ಹುಲಿ ದಾಳಿಯ ಭಯ ಆರಂಭವಾಗಿದ್ದು, ಜನರು ಹೊರಗೆ ಓಡಾಡಲು ಭಯಪಡುವಂತಾಗಿದೆ.
ಇದನ್ನೂ ಓದಿ:-ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ
3 ದಿನಗಳ ಹಿಂದೆ ಓಂಕಾರ ಅರಣ್ಯ ವಲಯದ ಕಚೇರಿಗೆ ತೆರಳಿ ಹುಲಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಬಂದಿದ್ದೆವು. ಅವರು ತಕ್ಷಣ ಕೂಂಬಿಂಗ್ ಮಾಡಿ ಹುಲಿಯನ್ನು ನಿಯಂತ್ರಿಸಿದ್ದರೆ ಇಂದು ಮಂಚಳ್ಳಿಯಲ್ಲಿ ಎರಡು ಹಸುಗಳ ಪ್ರಾಣ ಉಳಿಯುತ್ತಿತ್ತು. ಈಗ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.
ಅರಣ್ಯ ಇಲಾಖೆಯಿಂದ ಕೂಂಬಿಂಗ್ ನಡೆಸುತ್ತಿದ್ದು ಹುಲಿಯೋ, ಚಿರತೆಯೋ ಎಂಬ ಕುರಿತು ಅನುಮಾನವಿದೆ. ಒಂದು ಹಸು ಮೃತಪಟ್ಟಿದ್ದು, ಮತ್ತೊಂದು ಜೀವಂತವಾಗಿದೆ. ಜನರು ಕೂಂಬಿಂಗ್ಗೆ ಸಹಕರಿಸಬೇಕು ಎಂದು ಓಂಕಾರ್ ವಲಯಾಧಿಕಾರಿ ಹನುಮಂತಪ್ಪ ತಿಳಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…