Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಚಿರತೆ ದಾಳಿಗೆ ಹಸು ಬಲಿ

cow dies

ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ.

ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಗಿನ ಜಾವ 4 ಗಂಟೆಯ ಸಮಯದಲ್ಲಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಸುಮಾರು 50 ಸಾವಿರ ರೂ. ಮೌಲ್ಯದ ಹಸು ಸಾವಿಗೀಡಾಗಿರುವುದರಿಂದ ರೈತ ಚಿಕ್ಕನಂಜಪ್ಪ ಸಂಕಷ್ಟದಲ್ಲಿದ್ದು ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Tags:
error: Content is protected !!