gold robbery in Chamrajnagar district Hanur
ಹನೂರು : ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲ್ಲೂಕಿನ ಗಡಿಯಂಚಿನ ಹುಣಸೆಪಾಳ್ಯ ಗ್ರಾಮದ ಜಯಪ್ಪ ಎಂಬವರಿಗೆ ಸೇರಿದ ಜಮೀನಿನ ಮಾರ್ಗವಾಗಿ ಚಿರತೆ ಪ್ರವೇಶಿಸಿ ಕಾನಮೋಳೆ ದೊಡ್ಡಿ ಗ್ರಾಮದ ಜಡೇರುದ್ರ ಅವರಿಗೆ ಸೇರಿದ ಹಸುವನ್ನು ಕೊಂದುಹಾಕಿದೆ. ಜಮೀನಿನಲ್ಲಿ ಮಲಗಿದ್ದ ಇತರೆ ಜಾನುವಾರುಗಳು ಚಿರತೆಯನ್ನು ನೋಡಿ ಭಯದಿಂದ ಕಾಲ್ಕಿತ್ತಿವೆ.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮಾತನಾಡಿ, ಕಳೆದ ಹಲವಾರು ತಿಂಗಳುನಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ, ಸಾಕು ಪ್ರಾಣಿಗಳ ಸಂರಕ್ಷಣೆಯೇ ದೊಡ್ಡ ಜವಾಬ್ದಾರಿಯಾಗಿದೆ. ಒಂದೆಡೆ ಕಾಡಾನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದ್ದರೆ ಒಂದೆಡೆ ಕಾಡು ಪ್ರಾಣಿಗಳ ಹಾವಳಿಯಿಂದ ಸಾಕು ಪ್ರಾಣಿಗಳು ಬಲಿಯಾಗುತ್ತಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕಾಡುಪ್ರಾಣಿಗಳ ಸಂರಕ್ಷಣೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕೆಂದು ರೈತರು ಮನವಿ ಮಾಡಿದ್ದಾರೆ.
ಚಿರತೆ ದಾಳಿಯಿಂದ ಮೃತಪಟ್ಟಿರುವ ಹಸುವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕೆಂದು ನೊಂದ ರೈತ ಒತ್ತಾಯಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…