gold robbery in Chamrajnagar district Hanur
ಹನೂರು : ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲ್ಲೂಕಿನ ಗಡಿಯಂಚಿನ ಹುಣಸೆಪಾಳ್ಯ ಗ್ರಾಮದ ಜಯಪ್ಪ ಎಂಬವರಿಗೆ ಸೇರಿದ ಜಮೀನಿನ ಮಾರ್ಗವಾಗಿ ಚಿರತೆ ಪ್ರವೇಶಿಸಿ ಕಾನಮೋಳೆ ದೊಡ್ಡಿ ಗ್ರಾಮದ ಜಡೇರುದ್ರ ಅವರಿಗೆ ಸೇರಿದ ಹಸುವನ್ನು ಕೊಂದುಹಾಕಿದೆ. ಜಮೀನಿನಲ್ಲಿ ಮಲಗಿದ್ದ ಇತರೆ ಜಾನುವಾರುಗಳು ಚಿರತೆಯನ್ನು ನೋಡಿ ಭಯದಿಂದ ಕಾಲ್ಕಿತ್ತಿವೆ.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮಾತನಾಡಿ, ಕಳೆದ ಹಲವಾರು ತಿಂಗಳುನಿಂದ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ, ಸಾಕು ಪ್ರಾಣಿಗಳ ಸಂರಕ್ಷಣೆಯೇ ದೊಡ್ಡ ಜವಾಬ್ದಾರಿಯಾಗಿದೆ. ಒಂದೆಡೆ ಕಾಡಾನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದ್ದರೆ ಒಂದೆಡೆ ಕಾಡು ಪ್ರಾಣಿಗಳ ಹಾವಳಿಯಿಂದ ಸಾಕು ಪ್ರಾಣಿಗಳು ಬಲಿಯಾಗುತ್ತಿವೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕಾಡುಪ್ರಾಣಿಗಳ ಸಂರಕ್ಷಣೆಗೆ ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕೆಂದು ರೈತರು ಮನವಿ ಮಾಡಿದ್ದಾರೆ.
ಚಿರತೆ ದಾಳಿಯಿಂದ ಮೃತಪಟ್ಟಿರುವ ಹಸುವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಬೇಕೆಂದು ನೊಂದ ರೈತ ಒತ್ತಾಯಿಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…