ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ.
ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಽಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಹಸುವನ್ನು ಟ್ರಾಕ್ಟರ್ನಲ್ಲಿ ಅರಣ್ಯ ಇಲಾಖೆ ಕಚೇರಿ ಬಳಿ ತಂದು ಪ್ರತಿಭಟನೆ ಮಾಡಲು ಮುಂದಾದರು. ಆಗ ಸ್ಥಳಕ್ಕೆ ಆರ್ಎಫ್ಒ ತೆರಳಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಚಿರತೆ ದಾಳಿ ಮಾಡಿದೆ ಎಂಬ ಆರ್ ಎಫ್ ಒ ಹೇಳಿಕೆಗೆ ಆಕ್ರೋಶಗೊಂಡ ರೈತರು, ನಾವು ಕಣ್ಣಾರೆ ಹುಲಿ ದಾಳಿ ಮಾಡಿದ್ದನ್ನು ಕಂಡಿದ್ದೇವೆ ಎಂದರು.
ನಂತರ ಸಾಕಾನೆ ಮೂಲಕ ಹುಲಿ ಸೆರೆಗೆ ಕೂಂಬಿಂಗ್ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ಇದನ್ನು ಓದಿ: ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು
ಹಸು ಕಳೆದುಕೊಂಡ ರೈತ ಮಾದಪ್ಪನಿಗೆ ಅರಣ್ಯ ಇಲಾಖೆ ತಕ್ಷಣ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು. ನಂತರ ಇಲಾಖೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ರೈತರು ಹುಲಿ ದಾಳಿ ಮಾಡಿದೆ ಎಂದು ಹೇಳುತ್ತಿದ್ದಾರೆ. ಹಸು ಕಳೆದುಕೊಂಡ ರೈತರಿಗೆ ಇಲಾಖೆಯಿಂದ ೩೦ ಸಾವಿರ ರೂ. ಹಾಗೂ ಎನ್ಜಿಒ ಕಡೆಯಿಂದ ೭ ಸಾವಿರ ರೂ. ಪರಿಹಾರ ನೀಡಲಾಗುವುದು. ಹುಲಿ ಸೆರೆಗೆ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಸೋಮವಾರದಿಂದ ಆನೆ ಮೂಲಕ ಕೂಂಬಿಂಗ್ ಮಾಡಲಾಗುವುದು. ಎಂದು ವಲಯಾಧಿಕಾರಿ ಶಿವಕುಮಾರ್ ಭರವಸೆ ನೀಡಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…