ಚಾಮರಾಜನಗರ

ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ.

ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಽಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಹಸುವನ್ನು ಟ್ರಾಕ್ಟರ್‌ನಲ್ಲಿ ಅರಣ್ಯ ಇಲಾಖೆ ಕಚೇರಿ ಬಳಿ ತಂದು ಪ್ರತಿಭಟನೆ ಮಾಡಲು ಮುಂದಾದರು. ಆಗ ಸ್ಥಳಕ್ಕೆ ಆರ್‌ಎಫ್‌ಒ ತೆರಳಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಚಿರತೆ ದಾಳಿ ಮಾಡಿದೆ ಎಂಬ ಆರ್ ಎಫ್‌ ಒ ಹೇಳಿಕೆಗೆ ಆಕ್ರೋಶಗೊಂಡ ರೈತರು, ನಾವು ಕಣ್ಣಾರೆ ಹುಲಿ ದಾಳಿ ಮಾಡಿದ್ದನ್ನು ಕಂಡಿದ್ದೇವೆ ಎಂದರು.

ನಂತರ ಸಾಕಾನೆ ಮೂಲಕ ಹುಲಿ ಸೆರೆಗೆ ಕೂಂಬಿಂಗ್ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಇದನ್ನು ಓದಿ: ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು

ಹಸು ಕಳೆದುಕೊಂಡ ರೈತ ಮಾದಪ್ಪನಿಗೆ ಅರಣ್ಯ ಇಲಾಖೆ ತಕ್ಷಣ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು. ನಂತರ ಇಲಾಖೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ರೈತರು ಹುಲಿ ದಾಳಿ ಮಾಡಿದೆ ಎಂದು ಹೇಳುತ್ತಿದ್ದಾರೆ. ಹಸು ಕಳೆದುಕೊಂಡ ರೈತರಿಗೆ ಇಲಾಖೆಯಿಂದ ೩೦ ಸಾವಿರ ರೂ. ಹಾಗೂ ಎನ್‌ಜಿಒ ಕಡೆಯಿಂದ ೭ ಸಾವಿರ ರೂ. ಪರಿಹಾರ ನೀಡಲಾಗುವುದು. ಹುಲಿ ಸೆರೆಗೆ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಸೋಮವಾರದಿಂದ ಆನೆ ಮೂಲಕ ಕೂಂಬಿಂಗ್ ಮಾಡಲಾಗುವುದು. ಎಂದು ವಲಯಾಧಿಕಾರಿ ಶಿವಕುಮಾರ್ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

25 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

51 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

54 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

1 hour ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

1 hour ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago