ಚಾಮರಾಜನಗರ

ಹುಲಿ ದಾಳಿಗೆ ಹಸು ಬಲಿ ; ರೈತರ ಪ್ರತಿಭಟನೆ

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ.

ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಽಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಹಸುವನ್ನು ಟ್ರಾಕ್ಟರ್‌ನಲ್ಲಿ ಅರಣ್ಯ ಇಲಾಖೆ ಕಚೇರಿ ಬಳಿ ತಂದು ಪ್ರತಿಭಟನೆ ಮಾಡಲು ಮುಂದಾದರು. ಆಗ ಸ್ಥಳಕ್ಕೆ ಆರ್‌ಎಫ್‌ಒ ತೆರಳಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಚಿರತೆ ದಾಳಿ ಮಾಡಿದೆ ಎಂಬ ಆರ್ ಎಫ್‌ ಒ ಹೇಳಿಕೆಗೆ ಆಕ್ರೋಶಗೊಂಡ ರೈತರು, ನಾವು ಕಣ್ಣಾರೆ ಹುಲಿ ದಾಳಿ ಮಾಡಿದ್ದನ್ನು ಕಂಡಿದ್ದೇವೆ ಎಂದರು.

ನಂತರ ಸಾಕಾನೆ ಮೂಲಕ ಹುಲಿ ಸೆರೆಗೆ ಕೂಂಬಿಂಗ್ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಇದನ್ನು ಓದಿ: ಗುಂಡ್ಲುಪೇಟೆ | ಚಿರತೆ ದಾಳಿಗೆ ಕರು ಸಾವು

ಹಸು ಕಳೆದುಕೊಂಡ ರೈತ ಮಾದಪ್ಪನಿಗೆ ಅರಣ್ಯ ಇಲಾಖೆ ತಕ್ಷಣ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು. ನಂತರ ಇಲಾಖೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ರೈತರು ಹುಲಿ ದಾಳಿ ಮಾಡಿದೆ ಎಂದು ಹೇಳುತ್ತಿದ್ದಾರೆ. ಹಸು ಕಳೆದುಕೊಂಡ ರೈತರಿಗೆ ಇಲಾಖೆಯಿಂದ ೩೦ ಸಾವಿರ ರೂ. ಹಾಗೂ ಎನ್‌ಜಿಒ ಕಡೆಯಿಂದ ೭ ಸಾವಿರ ರೂ. ಪರಿಹಾರ ನೀಡಲಾಗುವುದು. ಹುಲಿ ಸೆರೆಗೆ ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಸೋಮವಾರದಿಂದ ಆನೆ ಮೂಲಕ ಕೂಂಬಿಂಗ್ ಮಾಡಲಾಗುವುದು. ಎಂದು ವಲಯಾಧಿಕಾರಿ ಶಿವಕುಮಾರ್ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago