ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ಇಲಾಖಾಧಿಕಾರಿಗಳು ಸುರಕ್ಷಿತವಾಗಿ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.
ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಜಗದೀಶ ಎಂಬವರಿಗೆ ಸೇರಿದ ಹಸುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
ಘಟನೆ ವಿವರ : ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಹಸುವೊಂದು ಬಾವಿಗೆ ಬಿದ್ದಿದೆ. ತಕ್ಷಣ ವಿಷಯ ತಿಳಿದ ಸ್ಥಳೀಯರು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಇಲಾಖೆಯ ಅಧಿಕಾರಿಗಳು ಸುಮಾರು ಒಂದು ತಾಸು ಕಾರ್ಯಾಚರಣೆ ನಡೆಸಿ ಹಸುವನ್ನು ಸುರಕ್ಷಿತವಾಗಿ ಮೇಲೆ ತಂದಿದ್ದಾರೆ.
ಈ ಸಂದರ್ಭದಲ್ಲಿ ಠಾಣಾಧಿಕಾರಿ ರವೀಂದ್ರ, ಸಿಬ್ಬಂದಿಗಳಾದ ಆನಂದ್,ಜಯಪ್ರಕಾಶ್, ಲಿಂಗೇಶ್, ಅನಿಲ್, ಇನ್ನಿತರರು ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…