ಚಾಮರಾಜನಗರ

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಮತ್ತೆ ಆನೆ ದಾಳಿ ನಡೆಸಿದರೆ ಕುಟುಂಬಸ್ಥರೆಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತ ಬಂಗಾರು ಎಚ್ಚರಿಕೆ ನೀಡಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ ಜಿ ಪಾಳ್ಯ ವಲಯ ಹಾಗೂ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಕಾಮಶೆಟ್ಟಿ ಎಂಬುವವರ ಜಮೀನಿನಲ್ಲಿ ತೆಂಗು, ಜೋಳ, ತರಕಾರಿ ಬೆಳೆಗಳಾದ ಅವರೆ, ತೊಗರಿ, ಮೆಣಸಿನಕಾಯಿ, ಬೀಟ್‌ರೋಟ್ ಬೆಳೆದಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಕಾಡಾನೆಗಳ ಹಿಂಡು ದಾಳಿ ನಡೆಸಿ ತರಕಾರಿ ಬೆಳೆ ಹಾಗೂ ಜೋಳದ ಬೆಳೆಯನ್ನು ನಾಶಪಡಿಸಿದೆ. ತೆಂಗಿನ ಮರದಲ್ಲಿ ಬೆಳೆದಿರುವ ಎಳನೀರನ್ನು ಸಂಪೂರ್ಣವಾಗಿ ಕುಡಿದು ನಾಶ ಮಾಡಿದೆ.

ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಸಾಲ ಮಾಡಿ ಕೃಷಿ ಪರಿಕರಗಳನ್ನು ಖರೀದಿಸಿ ಅಳವಡಿಸಲಾಗಿದೆ. ಕಾಡಾನೆ ನಿರಂತರವಾಗಿ ದಾಳಿ ಮಾಡಿ ಕೃಷಿ ಪರಿಕರಗಳನ್ನು ನಾಶ ಮಾಡಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೇನೆ. ಇದೀಗ ಬೆಳೆದಿರುವ ಬೆಳೆಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಆನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಮೂರು ದಿನಗಳಿಂದ ಕುಟುಂಬಸ್ಥರೆಲ್ಲರೂ ನಿದ್ದೆ ಮಾಡದೆ ಬೆಳೆ ಕಾಯುತ್ತಿದ್ದೇವೆ. ಆದರೂ ಯಾವುದೇ ಶಬ್ದಗಳಿಗೂ ಜಗ್ಗದೆ ಕಾಡಾನೆಗಳು ಬೆಳೆಗಳನ್ನು ನಾಶ ಮಾಡುತ್ತಿದೆ.

ಈ ನಿಟ್ಟಿನಲ್ಲಿ ಒಂದು ತೀರ್ಮಾನಕ್ಕೆ ಬಂದಿದ್ದು, ಆನೆ ದಾಳಿ ಮುಂದುವರೆದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಹರಿಬಿಟ್ಟು ಆಕ್ರೋಶ ಹೊರಹಾಕಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

5 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

21 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

43 mins ago

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

57 mins ago

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…

1 hour ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

2 hours ago