ಚಾಮರಾಜನಗರ

ದಲಿತ ಮಹಿಳೆಯಿಂದ ಬಿಸಿಯೂಟ ತಯಾರು : ಶಾಲೆಗೆ ಬಾರದ ಮಕ್ಕಳು

ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ

ಟಿಸಿ ಪಡೆದು ಬೇರೆ ಶಾಲೆಗಳಿಗೆ ಸೇರ್ಪಡೆ

ಚಾಮರಾಜನಗರ : ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ತಯಾರಿಸುತ್ತಿದ್ದಾರೆ ಹಾಗೂ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಪೋಷಕರು ವರ್ಗಾವಣೆ ಪತ್ರ ಪಡೆದು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುತ್ತಿರುವುದು ಬೆಳಕಿಗೆ ಬಂದಿದೆ.

ಪೋಷಕರು ಟಿಸಿ ಪಡೆದು ತಮ್ಮ ಮಕ್ಕಳನ್ನು ಸಮೀಪದ ಆಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುರುಮಲ್ಲೇಶ್ವರ ಹಿರಿಯ ಪ್ರಾಥಮಿಕ ಶಾಲೆಗೆ ಬೇರೆ ಕಡೆ ಸೇರಿಸುತ್ತಿದ್ದಾರೆ. ಸದ್ಯ ಈ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳಿದ್ದು ಈ ಸರ್ಕಾರಿ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ.

ಹಿಂದೆ ಶಾಲೆಯಲ್ಲಿ ಮೂವರು ಶಿಕ್ಷಕರಿದ್ದರು. ಇವರ ಒಳ ಜಗಳದಿಂದ ಸಮರ್ಪಕವಾಗಿ ಪಾಠ ಪ್ರವಚನ ನಡೆಯದೆ ಪೋಷಕರು ಬೇಸತ್ತು ಹಲವು ಬಾರಿ ಈ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದರು. ಮಕ್ಕಳ ಸಂಖ್ಯೆ ೨೧ಕ್ಕೆ ಕುಸಿದಿತ್ತು. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾದ ಕಾರಣ ಹಿಂದುಳಿದ ಹಾಗೂ ದಲಿತ ಸಮುದಾಯದ ಸೇರಿದ ಇಬ್ಬರು ಅಡುಗೆ ಸಿಬ್ಬಂದಿ ಪೈಕಿ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಲಾಯಿತು.

ರೋಸ್ಟರ್ ಪದ್ಧತಿ ಪ್ರಕಾರ ದಲಿತ ಮಹಿಳೆಯನ್ನು ಅಡುಗೆ ಸಿಬ್ಬಂದಿಯಾಗಿ ನೇಮಕ ಮಾಡಲಾಗಿತ್ತು. ಬಳಿಕ ಮಕ್ಕಳ ಸಂಖ್ಯೆ ದಿಢೀರ್ ಕುಸಿಯಿತು. ೧೨ ವಿದ್ಯಾರ್ಥಿಗಳು ವರ್ಗಾವಣೆ ಪತ್ರ ಪಡೆದು ಪಕ್ಕದ ಆಲೂರು ಗ್ರಾಮದ ಶಾಲೆಗಳಿಗೆ ಸೇರಿಕೊಂಡಿದ್ದಾರೆ. ಉಳಿದ ೯ ಮಂದಿಯಲ್ಲಿ ನಾಲ್ವರು ಮಕ್ಕಳ ಪೋಷಕರು ಟಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಅಡುಗೆ ಮಾಡುವರು ದಲಿತ ಮಹಿಳೆ ಎಂಬುದೇ ಇದಕ್ಕೆಲ್ಲಾ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಾಲೆಗೆ ಅಧಿಕಾರಿಗಳು ದೌಡು
ಈ ವಿಷಯ ಬಯಲಾಗುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಬಿಆರ್‌ಸಿ ರಾಜೀವ್, ಸಂತೇಮರಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ತಾಜುದ್ದೀನ್ ಅವರು ಸಂಜೆ ಶಾಲೆಗೆ ತೆರಳಿ ಶಿಕ್ಷಕರು, ಪೋಷಕರ ಜೊತೆ ಮಾತುಕತೆ ನಡೆಸಿದರು. ಶಾಲೆಯಲ್ಲಿ ಸರಿಯಾಗಿ ಪಾಠ ನಡೆಯುತ್ತಿಲ್ಲ. ಶಿಕ್ಷಕರ ನಡುವೆ ಹೊಂದಾಣಿಕೆಯಿಲ್ಲ ಆದ್ದರಿಂದ ವರ್ಗಾವಣೆ ಪಡೆದು ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತಿದ್ದೇವೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು. ಸದ್ಯ ಶಾಲೆಯಲ್ಲಿರುವ ಶಿಕ್ಷಕರಾದ ರವಿ ಮತ್ತು ನಟರಾಜು ಅವರನ್ನು ಬೇರೆಡೆಗೆ ವರ್ಗಾಯಿಸಿ ಬೇರೆ ಶಿಕ್ಷಕರನ್ನು ನೇಮಿಸಲಾಗುವುದು. ಹಾಲಿ ಶಾಲೆಯಲ್ಲಿರುವ ಮಕ್ಕಳಿಗೆ ಟಿಸಿಯನ್ನು ನೀಡುವುದಿಲ್ಲ. ಇಲ್ಲಿಂದ ಬೇರೆ ಶಾಲೆಗೆ ಹೋಗಿರುವ ವಿದ್ಯಾರ್ಥಿಗಳನ್ನು ಮತ್ತೆ ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಬಿಇಒ ಹನುಮಶೆಟ್ಟಿ ಭರವಸೆ ನೀಡಿದರು.

ಈ ಶಾಲೆಯಲ್ಲಿ ಕಳೆದ ೨೦ಕ್ಕೂ ಹೆಚ್ಚು ವರ್ಷಗಳಿಂದ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದೇನೆ. ಇತ್ತೀಚೆಗೆ ನನ್ನನ್ನು ಮುಖ್ಯ ಅಡುಗೆಯವರಾಗಿ ನೇಮಿಸಿದ ಬಳಿಕ ಮಕ್ಕಳು ಶಾಲೆ ಬಿಡುತ್ತಿದ್ದಾರೆ. ಶಾಲೆ ಮುಚ್ಚಿದರೆ ನಾನು ಎಲ್ಲಿಗೆ ಹೋಗಬೇಕು. -ನಂಜಮ್ಮ, ಅಡುಗೆ ಸಿಬ್ಬಂದಿ

ಬಿಇಒ, ಬಿಆರ್‌ಸಿ ಅವರು ಶಾಲೆಗೆ ಭೇಟಿ ಮಾಡಿ ಪೋಷಕರು ಹಾಗೂ ಶಿಕ್ಷಕರ ಜೊತೆ ಮಾತನಾಡಿ ಸಮಸ್ಯೆಯನ್ನು ಪರಿಹರಿಸಲು ಯತ್ನಿಸಿದ್ದಾರೆ. ಬುಧವಾರ ನಾನು ಶಾಲೆಗೆ ತೆರಳಿ ಪೋಷಕರ ಜೊತೆ ಮಾತನಾಡಿ ಮನವೊಲಿಸುತ್ತೇನೆ. -ರಾಮಚಂದ್ರರಾಜೇ ಅರಸ್, ಡಿಡಿಪಿಐ

ಮಕ್ಕಳ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಇಬ್ಬರು ಅಡುಗೆಯವರ ಪೈಕಿ ಒಬ್ಬರನ್ನು ೨ ತಿಂಗಳ ಹಿಂದೆ ಸರ್ಕಾರದ ನೀತಿ ನಿಯಮಾನುಸಾರ ತೆಗೆದು ಹಾಕಲಾಗಿದೆ. ನಂತರದ ಬೆಳವಣಿಗೆಯಲ್ಲಿ ಪೋಷಕರು ಮಕ್ಕಳ ಟಿಸಿ ಪಡೆದು ಕರೆದುಕೊಂಡು ಹೋಗಿದ್ದಾರೆ. ಯಾವ ಕಾರಣಕ್ಕೆ ಪಡೆಯುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ.
-ಚಿನ್ನಸ್ವಾಮಿ, ಮುಖ್ಯಶಿಕ್ಷಕ

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago