ಚಾಮರಾಜನಗರ

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಜೊತೆ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಹನೂರು ಪಟ್ಟಣದ ತಹಶಿಲ್ದಾರ್‌ ಕಚೇರಿ ಮುಂಭಾಗ ಜಮಾಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮಂಡ್ಯ ಜಿಲ್ಲಾ ಸಂಚಾಲಕ ನಂಜುಂಡ ಮೌರ್ಯ ಅವರು, ದೊಮ್ಮನ ಗದ್ದೆ ಗ್ರಾಮದಲ್ಲಿ ಸುಮಾರು 85 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಗೆ ಸೇರಿದ ಆದಿ ಜಾಂಬವ ಸಮುದಾಯದ ಕುಟುಂಬಗಳು ನೂರಾರು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಈ ಕುಟುಂಬಗಳಿಗೆ ಸರ್ಕಾರ ಬಿಪಿಎಸ್‌ ಕಾರ್ಡ್‌ ಸಹ ವಿತರಿಸಿದೆ. ಈ ನಿಟ್ಟಿನಲ್ಲಿ ವಾಸ ಮಾಡಲು ಸರ್ಕಾರ ನಿವೇಶನ ಮತ್ತು ವಸತಿ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ತಹಶೀಲ್ದಾರ್‌ ಗುರುಪ್ರಸಾದ್‌ ಮಾತನಾಡಿ, ನೀವು ಶೆಡ್‌ ಹಾಕಿಕೊಂಡು ಇರುವ ಸರ್ವೆ ನಂಬರ್‌ ಸಿವಿಲ್‌ ನ್ಯಾಯಾಲಯದಲ್ಲಿ ಇದೆ. ಆದ್ದರಿಂದ ನಾನು ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ಈ ಪ್ರದೇಶ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗ ಗುರುತಿಸಿ ಸರ್ವೆ ಮಾಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

17 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

17 hours ago