ಚಾಮರಾಜನಗರ

ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಹಲವು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಪ್ರವಾಹ ಎದುರಿಸುತ್ತಿರುವ ಗ್ರಾಮಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಜನತೆಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿದೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಮನೆಗಳು ಸಂಪೂರ್ಣ ಮುಳುಗಡೆಯಾದರೆ ಯಾರೂ ಭಯಪಡಬೇಡಿ. ಎಲ್ಲರೂ ಕಾಳಜಿ ಕೇಂದ್ರಗಳಿಗೆ ತೆರಳಿ. ಜಾನುವಾರುಗಳಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನು ಕೊಳ್ಳೇಗಾಲ ನದಿ ಪಾತ್ರದ ಜನತೆಯ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ಇಡಲಾಗಿದ್ದು, ಜನತೆ ಸಂಕಷ್ಟಕ್ಕೆ ಸಿಲುಕದಂತೆ ತೀವ್ರ ನಿಗಾ ಇಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago