ಚಾಮರಾಜನಗರ

ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಹಲವು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಪ್ರವಾಹ ಎದುರಿಸುತ್ತಿರುವ ಗ್ರಾಮಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಜನತೆಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿದೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಮನೆಗಳು ಸಂಪೂರ್ಣ ಮುಳುಗಡೆಯಾದರೆ ಯಾರೂ ಭಯಪಡಬೇಡಿ. ಎಲ್ಲರೂ ಕಾಳಜಿ ಕೇಂದ್ರಗಳಿಗೆ ತೆರಳಿ. ಜಾನುವಾರುಗಳಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಂದು ಮನವಿ ಮಾಡಿದ್ದಾರೆ.

ಇನ್ನು ಕೊಳ್ಳೇಗಾಲ ನದಿ ಪಾತ್ರದ ಜನತೆಯ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ಇಡಲಾಗಿದ್ದು, ಜನತೆ ಸಂಕಷ್ಟಕ್ಕೆ ಸಿಲುಕದಂತೆ ತೀವ್ರ ನಿಗಾ ಇಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

32 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

55 mins ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

5 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

10 hours ago