ಚಾಮರಾಜನಗರ: ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದ್ದಾರೆ.
ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಹಲವು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಪ್ರವಾಹ ಎದುರಿಸುತ್ತಿರುವ ಗ್ರಾಮಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಜನತೆಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿದೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಮನೆಗಳು ಸಂಪೂರ್ಣ ಮುಳುಗಡೆಯಾದರೆ ಯಾರೂ ಭಯಪಡಬೇಡಿ. ಎಲ್ಲರೂ ಕಾಳಜಿ ಕೇಂದ್ರಗಳಿಗೆ ತೆರಳಿ. ಜಾನುವಾರುಗಳಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿ ಎಂದು ಮನವಿ ಮಾಡಿದ್ದಾರೆ.
ಇನ್ನು ಕೊಳ್ಳೇಗಾಲ ನದಿ ಪಾತ್ರದ ಜನತೆಯ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ಇಡಲಾಗಿದ್ದು, ಜನತೆ ಸಂಕಷ್ಟಕ್ಕೆ ಸಿಲುಕದಂತೆ ತೀವ್ರ ನಿಗಾ ಇಡಲಾಗಿದೆ.
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…