ಚಾಮರಾಜನಗರ

ಹುಲಿಗಳ‌ ಸಾವಿಗೆ ಡಿಸಿಎಫ್ ವರ್ತನೆಯೂ ಕಾರಣ: ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ

ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್‌ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ ನಿರ್ವಹಣೆಯಿಂದಲೇ ಈ ರೀತಿ ಅವಘಡ ಉಂಟಾಗಿದೆ. ಜನರು ಹಾಗೂ ಕೆಳಹಂತದ ಅಧಿಕಾರಿಗಳ ವಿರುದ್ಧ ಉತ್ತಮ ಸ್ಪಂದನೆ ಇಲ್ಲ ಎಂದು ಕೆಳಹಂತದ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಅಧ್ಯಯನ ಮಾಡುತ್ತಿದ್ದಾರೆ.

 

ಹಸುವಿನ ಮೇಲೆ ದಾಳಿಯಾದ ಕೂಡಲೇ ಹಸು ಕಳೆಬರವನ್ನು ವಿಲೇವಾರಿ ಮಾಡಬೇಕಿತ್ತು. ಜನರ ಜೊತೆ ಉತ್ತಮ ಸ್ಪಂದನೆ ಇಟ್ಟುಕೊಂಡಿದ್ದರೆ ಈ ರೀತಿ ದುರ್ಘಟನೆ ನಡೆಯುತ್ತಿಲ್ಲ. ವಿಷ ಹಾಕಿದವರ ಜೊತೆಗೆ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದ ಕಾಡು ತಮಿಳುನಾಡಿನ ದನಗಳಿಗೆ ಮೇವಿನ ತಾಣವಾಗಿದೆ. ಗುತ್ತಿಗೆ ಮೇಲೆ ತಮಿಳುನಾಡಿನ ಹಸುಗಳನ್ನು ತಂದು ಕಾಡಂಚಿನ ಜನರು ಸಾಕುತ್ತಿದ್ದಾರೆ. ತಮಿಳುನಾಡಿನ ದನಗಳನ್ನು ತಂದು ಸಾಕಲು ಕಡಿವಾಣ ಹಾಕಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago