ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ ನಿರ್ವಹಣೆಯಿಂದಲೇ ಈ ರೀತಿ ಅವಘಡ ಉಂಟಾಗಿದೆ. ಜನರು ಹಾಗೂ ಕೆಳಹಂತದ ಅಧಿಕಾರಿಗಳ ವಿರುದ್ಧ ಉತ್ತಮ ಸ್ಪಂದನೆ ಇಲ್ಲ ಎಂದು ಕೆಳಹಂತದ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಅಧ್ಯಯನ ಮಾಡುತ್ತಿದ್ದಾರೆ.
ಹಸುವಿನ ಮೇಲೆ ದಾಳಿಯಾದ ಕೂಡಲೇ ಹಸು ಕಳೆಬರವನ್ನು ವಿಲೇವಾರಿ ಮಾಡಬೇಕಿತ್ತು. ಜನರ ಜೊತೆ ಉತ್ತಮ ಸ್ಪಂದನೆ ಇಟ್ಟುಕೊಂಡಿದ್ದರೆ ಈ ರೀತಿ ದುರ್ಘಟನೆ ನಡೆಯುತ್ತಿಲ್ಲ. ವಿಷ ಹಾಕಿದವರ ಜೊತೆಗೆ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದ ಕಾಡು ತಮಿಳುನಾಡಿನ ದನಗಳಿಗೆ ಮೇವಿನ ತಾಣವಾಗಿದೆ. ಗುತ್ತಿಗೆ ಮೇಲೆ ತಮಿಳುನಾಡಿನ ಹಸುಗಳನ್ನು ತಂದು ಕಾಡಂಚಿನ ಜನರು ಸಾಕುತ್ತಿದ್ದಾರೆ. ತಮಿಳುನಾಡಿನ ದನಗಳನ್ನು ತಂದು ಸಾಕಲು ಕಡಿವಾಣ ಹಾಕಬೇಕು ಎಂದು ಹೇಳಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…