ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.21 ರಿಂದ 10 ದಿನಗಳ ಕಾಲ ಆಯೋಜಿಸಿರುವ ಕುಡಿತ ಬಿಡಿಸುವ ಶಿಬಿರಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಿಬಿರದ ಸಂಚಾಲಕ ಡಾ. ಸೋಮಶೇಖರ್ ತಿಳಿಸಿದರು.
ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಕುಡಿತ ಬಿಡಿಸುವ ಶಿಬಿರ ಆಯೋಜನೆ ಸಂಬಂಧ ಮಂಗಳವಾರ ಆಯೋಜಿಸಿದ್ದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮದ್ಯವ್ಯಸನಿಗಳಲ್ಲಿ ಕುಡಿತ ಬಿಡಿಸಿ ಉತ್ತಮ ಜೀವನವನ್ನು ರೂಪಿಸಿಕೊಳ್ಳುವ ಸಲುವಾಗಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ತಾಲೂಕು ಕೇಂದ್ರಗಳಲ್ಲಿ 10 ದಿನಗಳ ಕಾಲ ಕುಡಿತ ಬಿಡಿಸುವ ಶಿಬಿರವನ್ನು 2024ರಿಂದಲೂ ಆಯೋಜಿಸಲಾಗುತ್ತಿದೆ. ಈವರೆಗೂ ನಡೆದ 18 ಶಿಬಿರಗಳಲ್ಲಿ 1152 ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಆದರೆ ಹೊಸದಾಗಿ ರಚನೆಯಾದ ಹನೂರು ತಾಲೂಕಿನಲ್ಲಿ ಇದೀಗ ಶಿಬಿರವನ್ನು ಆಯೋಜಿಸಲಾಗಿದೆ. ಆದ್ದರಿಂದ ಮದ್ಯ ವ್ಯಸನಿಗಳು ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಸಂಘ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಇದೇ ವೇಳೆ ಶಿಬಿರ ಯಶಸ್ವಿ ಸಂಬಂಧ ನೆರೆದಿದ್ದವರಿಂದ ಅಗತ್ಯ ಸಲಹೆ, ಸೂಚನೆಯನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಪಪಂ ಸದಸ್ಯರಾದ ಹರೀಶ್, ಸುದೇಶ್, ಸೋಮಶೇಖರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಗೌಡ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ನಿರ್ದೇಶಕ ಕಣ್ಣೂರು ಬಸವರಾಜಪ್ಪ, ತಾಲೂಕು ನಿರ್ದೇಶಕ ವಿನೋದ್, ಹಾಪ್ ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ಮುಖಂಡರಾದ ವೆಂಕಟೇಶ್, ನಂಜುಂಡಸ್ವಾಮಿ, ಶಾಂತಮೂರ್ತಿ, ಮಾದೇಶ್, ರಾಜಶೇಖರ್, ಮಾದಪ್ಪ ಹಾಗೂ ಇನ್ನಿತರರು ಹಾಜರಿದ್ದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…