ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.21 ರಿಂದ 10 ದಿನಗಳ ಕಾಲ ಆಯೋಜಿಸಿರುವ ಕುಡಿತ ಬಿಡಿಸುವ ಶಿಬಿರಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಿಬಿರದ ಸಂಚಾಲಕ ಡಾ. ಸೋಮಶೇಖರ್ ತಿಳಿಸಿದರು.
ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಕುಡಿತ ಬಿಡಿಸುವ ಶಿಬಿರ ಆಯೋಜನೆ ಸಂಬಂಧ ಮಂಗಳವಾರ ಆಯೋಜಿಸಿದ್ದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮದ್ಯವ್ಯಸನಿಗಳಲ್ಲಿ ಕುಡಿತ ಬಿಡಿಸಿ ಉತ್ತಮ ಜೀವನವನ್ನು ರೂಪಿಸಿಕೊಳ್ಳುವ ಸಲುವಾಗಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ತಾಲೂಕು ಕೇಂದ್ರಗಳಲ್ಲಿ 10 ದಿನಗಳ ಕಾಲ ಕುಡಿತ ಬಿಡಿಸುವ ಶಿಬಿರವನ್ನು 2024ರಿಂದಲೂ ಆಯೋಜಿಸಲಾಗುತ್ತಿದೆ. ಈವರೆಗೂ ನಡೆದ 18 ಶಿಬಿರಗಳಲ್ಲಿ 1152 ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಆದರೆ ಹೊಸದಾಗಿ ರಚನೆಯಾದ ಹನೂರು ತಾಲೂಕಿನಲ್ಲಿ ಇದೀಗ ಶಿಬಿರವನ್ನು ಆಯೋಜಿಸಲಾಗಿದೆ. ಆದ್ದರಿಂದ ಮದ್ಯ ವ್ಯಸನಿಗಳು ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು. ಸಂಘ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಇದೇ ವೇಳೆ ಶಿಬಿರ ಯಶಸ್ವಿ ಸಂಬಂಧ ನೆರೆದಿದ್ದವರಿಂದ ಅಗತ್ಯ ಸಲಹೆ, ಸೂಚನೆಯನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಪಪಂ ಸದಸ್ಯರಾದ ಹರೀಶ್, ಸುದೇಶ್, ಸೋಮಶೇಖರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಗೌಡ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ನಿರ್ದೇಶಕ ಕಣ್ಣೂರು ಬಸವರಾಜಪ್ಪ, ತಾಲೂಕು ನಿರ್ದೇಶಕ ವಿನೋದ್, ಹಾಪ್ ಕಾಮ್ಸ್ ನಿರ್ದೇಶಕ ಶಿವಪುರ ಲೋಕೇಶ್, ಮುಖಂಡರಾದ ವೆಂಕಟೇಶ್, ನಂಜುಂಡಸ್ವಾಮಿ, ಶಾಂತಮೂರ್ತಿ, ಮಾದೇಶ್, ರಾಜಶೇಖರ್, ಮಾದಪ್ಪ ಹಾಗೂ ಇನ್ನಿತರರು ಹಾಜರಿದ್ದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…