ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.
ಸತ್ತೇಗಾಲ ಹ್ಯಾಂಡ್ಪೋಸ್ಟ್ ಸಮೀಪ ಶುಕ್ರವಾರ(ಸೆ.20) ಮಧ್ಯಾಹ್ನದಿಂದ ಕಾರು ನಿಂತಿದ್ದು, ಸುಮಾರು 40 ರಿಂದ 45 ವರ್ಷದ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಮೃತದೇಹ ಕಾರಿನ ಹಿಂದೆ ಸೀಟ್ನಲ್ಲಿ ಮಲಗಿದ್ದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.
ಎರಡು ದಿನಗಳಿಂದ ಅಲ್ಲೇ ನಿಲ್ಲಿಸಿದ್ದ ಕಾರಿನ ಡೋರ್ನಿಂದ ರಕ್ತ ಕೆಳಗಡೆ ಸುರಿದು ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆಡ ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಗ್ರಾಮಾಂತರ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.
ನಂತರ ಸ್ಥಳಕ್ಕೆ ಬಂದ ಕೊಳ್ಳೇಗಾಲ ಪೊಲೀಸ್ ಇನ್ಸ್ಪೆಕ್ಟರ್ ಶಿವಮಾದಯ್ಯ, ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಸನ್ಸ್ಪೆಕ್ಟರ್ ಸುಪ್ರೀತ್, ಅಪರಾಧ ವಿಭಾಗದ ಎಸ್ಐ ಚಲುವರಾಜು ಮತ್ತು ಸಿಬ್ಬಂದಿ ವರ್ಗದವರು ಕೊಳೆತ ಮೃತದೇಹವನ್ನು ಪರಿಶೀಲಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…