ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು.
ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್ನಲ್ಲಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಸೋಮಣ್ಣ ಅವರು ಕುತ್ತಿಗೆಯಲ್ಲಿ ಚಿನ್ನದ ಸರ ಸೇರಿದಂತೆ ಒಂದಷ್ಟು ಚಿನ್ನ ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಚಿನ್ನಾಭರಣ ದೋಚಲು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಮತ್ತೆ ಕೆಲವರು ವೈಷಮ್ಯದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
ಇದನ್ನೂ ಓದಿ:-ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಬೇಗೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…