ಚಾಮರಾಜನಗರ

ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ ; ಕೊಲೆ ಶಂಕೆ

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು.

ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಸೋಮಣ್ಣ ಅವರು ಕುತ್ತಿಗೆಯಲ್ಲಿ ಚಿನ್ನದ ಸರ ಸೇರಿದಂತೆ ಒಂದಷ್ಟು ಚಿನ್ನ ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಚಿನ್ನಾಭರಣ ದೋಚಲು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಮತ್ತೆ ಕೆಲವರು ವೈಷಮ್ಯದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ:-ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆ ನೀಡಬೇಕು : ರಾಜ್ಯ ರೈತ ಸಂಘ ಆಗ್ರಹ

ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಬೇಗೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

6 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

7 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

22 hours ago