ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ ಆರ್.ವಿಜಯ್ (10) ಎಂದು ಗುರುತಿಸಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನನ್ನು ತಾಯಿ ಗೌರಿ ಹಾಗೂ ಕುಟುಂಬಸ್ಥರು ಶುಕ್ರವಾರ ಆಸ್ಪತ್ರೆಗೆ ಕರೆತಂದಾಗ ಆತನಿಗೆ ಅಪೆಂಡಿಕ್ಸ್ ಸಮಸ್ಯೆ ಇದ್ದು, ಶಸ್ತ್ರಚಿಕಿತ್ಸೆ ಮಾಡಿಸುವಂತೆ ವೈದ್ಯರು ಸಲಹೆ ನೀಡಿದ್ದರು.
ಶನಿವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆ ನಡೆದಿದ್ದು, ವಿಶ್ರಾಂತಿಗೆಂದು ಮಲಗಿಸಿದ್ದ ಬಾಲಕನಿಗೆ 2ಗಂಟೆ ಕಳೆದರೂ ಯಾವುದೇ ಚಲನವಿಲ್ಲದ ಹಿನ್ನೆಲೆ ಬಾಲಕನ ಉಸಿರಾಟವನ್ನು ಗಮನಿಸಿದ ವೈದ್ಯರು ಬಾಲಕ ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಬಾಲಕನ ಸಾವಿಗೆ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆಸ್ಪತ್ರೆಯ ಗಾಜುಗಳನ್ನು ಒಡೆದುಹಾಕಿದ್ದಾರೆ.
ಘಟನೆಗೆ ಸಂಬಂಧಿಸಿ ವೈದ್ಯ, ಆಸ್ಪತ್ರೆಯ ಮುಖ್ಯಸ್ಥ, ಅರಿವಳಿಕೆ ತಜ್ಞವೈದ್ಯ ಸೇರಿದಂತೆ ನರ್ಸ್ ಗಳನ್ನು ಕೂಡಲೇ ಬಂಧಿಸಬೇಕು ಎಂದು ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದು ಡಿವೈಎಸ್ಪಿ ಸೋಮೇಗೌಡ ನೇತೃತ್ವದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಸ್ಪತ್ರೆಗೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ.
ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಕೆ.ಮಹೇಶ್ ಕುಮಾರ್ ಅವ ರಿಗೆ ಮೃತ ಬಾಲಕನ ಕುಟುಂಬದವರು ದೂರು ನೀಡಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…