ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ ಆರ್.ವಿಜಯ್ (10) ಎಂದು ಗುರುತಿಸಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನನ್ನು ತಾಯಿ ಗೌರಿ ಹಾಗೂ ಕುಟುಂಬಸ್ಥರು ಶುಕ್ರವಾರ ಆಸ್ಪತ್ರೆಗೆ ಕರೆತಂದಾಗ ಆತನಿಗೆ ಅಪೆಂಡಿಕ್ಸ್ ಸಮಸ್ಯೆ ಇದ್ದು, ಶಸ್ತ್ರಚಿಕಿತ್ಸೆ ಮಾಡಿಸುವಂತೆ ವೈದ್ಯರು ಸಲಹೆ ನೀಡಿದ್ದರು.
ಶನಿವಾರ ಮಧ್ಯಾಹ್ನ ಶಸ್ತ್ರಚಿಕಿತ್ಸೆ ನಡೆದಿದ್ದು, ವಿಶ್ರಾಂತಿಗೆಂದು ಮಲಗಿಸಿದ್ದ ಬಾಲಕನಿಗೆ 2ಗಂಟೆ ಕಳೆದರೂ ಯಾವುದೇ ಚಲನವಿಲ್ಲದ ಹಿನ್ನೆಲೆ ಬಾಲಕನ ಉಸಿರಾಟವನ್ನು ಗಮನಿಸಿದ ವೈದ್ಯರು ಬಾಲಕ ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಬಾಲಕನ ಸಾವಿಗೆ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆಸ್ಪತ್ರೆಯ ಗಾಜುಗಳನ್ನು ಒಡೆದುಹಾಕಿದ್ದಾರೆ.
ಘಟನೆಗೆ ಸಂಬಂಧಿಸಿ ವೈದ್ಯ, ಆಸ್ಪತ್ರೆಯ ಮುಖ್ಯಸ್ಥ, ಅರಿವಳಿಕೆ ತಜ್ಞವೈದ್ಯ ಸೇರಿದಂತೆ ನರ್ಸ್ ಗಳನ್ನು ಕೂಡಲೇ ಬಂಧಿಸಬೇಕು ಎಂದು ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದು ಡಿವೈಎಸ್ಪಿ ಸೋಮೇಗೌಡ ನೇತೃತ್ವದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಸ್ಪತ್ರೆಗೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ.
ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಿ.ಕೆ.ಮಹೇಶ್ ಕುಮಾರ್ ಅವ ರಿಗೆ ಮೃತ ಬಾಲಕನ ಕುಟುಂಬದವರು ದೂರು ನೀಡಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…