ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಈಚೆಗೆ ನಡೆದ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಡಿಸಿಎಫ್ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಹುಲಿಗಳ ಸಾವಿನ ಸಂಬಂಧ ಸರ್ಕಾರ ರಚಿಸಿದ್ದ ಉನ್ನತ ಮಟ್ಟಡ ತನಿಖಾ ತಮಿತಿ ನೀಡಿರುವ ಶಿಫಾರಸಿನ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಲಾಗಿದೆ. ಜೊತೆಗೆ ಸರ್ಕಾರದ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯುವಂತಿಲ್ಲ ಎಂದು ಆದೇಶಿಸಿದೆ.





