ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಗಳು ವಿಚಾರಣೆ ನಡೆಸುತ್ತಿದ್ದಾರೆ.
ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ನಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿಕೆ ನೀಡಿದ್ದರು. ಆದರೆ ತೀವ್ರ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್ ಮಾದರಾಜು ಐದು ಹುಲಿಗಳ ಸಾವಿಗೆ ನಾನೇ ಕಾರಣ. ನಾನು ತುಂಬಾ ಪ್ರೀತಿಯಿಂದ ಹಸುವನ್ನು ಸಾಕಿದ್ದೆ. ಆದರೆ ಹುಲಿ ಅದನ್ನು ತಿಂದು ಹಾಕಿತ್ತು. ಸತ್ತ ಹಸುವಿಗೆ ವಿಷ ಹಾಕಿದ್ದೆ. ಅದನ್ನು ತಿಂದು ಹುಲಿಗಳು ಸಾವನ್ನಪ್ಪಿವೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…