ಚಾಮರಾಜನಗರ

ಸಹಸ್ರಾರು ಮೀನುಗಳ ಸಾವು : ವಿಷಪ್ರಾಶನ ಶಂಕೆ

ಚಾಮರಾಜನಗರ : ತಾಲ್ಲೂಕಿನ ದೊಡ್ಡಮೋಳೆ ಗ್ರಾಮದ ಸಮೀಪವಿರುವ ದೊಡ್ಡಕೆರೆಯಲ್ಲಿ ಸಹಸ್ರಾರು ಮೀನುಗಳು ಮೃತಪಟ್ಟಿದ್ದು, ವಿಷಪ್ರಾಶನ ಅಥವಾ ಹೊಸ ನೀರಿಗೆ ಹೊಂದಿಕೊಳ್ಳದೆ ಮೃತಪಟ್ಟಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವ ಮೀನುಗಳು ಕೆರೆಯ ದಡದಲ್ಲಿ ತೇಲಾಡುತ್ತಿದ್ದು, ಈ ಕೆರೆಯಲ್ಲಿ ಮೀನು ಸಾಕಾಣಿಕೆ ಗುತ್ತಿಗೆ ಪಡೆದಿದ್ದ ಚಿಕ್ಕಮೋಳೆ ಗ್ರಾಮದ ನಿಸರ್ಗ ಮೀನುಗಾರರ ಸಂಘದ ಸದಸ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುತ್ತೂರು ಏತ ಯೋಜನೆಯ 2ನೇ ಹಂತಕ್ಕೆ ಸೇರಿದ ಕೆರೆಗಳ ಪೈಕಿ ದೊಡ್ಡ ಕೆರೆಯು ಒಂದಾಗಿದ್ದು, ಇತ್ತೀಚೆಗೆ ಈ ಕೆರೆಗೆ ಕಬಿನಿ ನೀರು ತುಂಬಿಸಲಾಗುತ್ತಿದೆ. ಹೊಸ ನೀರು ಕೆರೆ ಅಂಗಳದಲ್ಲಿ ಸಂಗ್ರಹವಾಗಿದ್ದು ಈ ನೀರಿಗೆ ಹೊಂದಿಕೊಳ್ಳಲಾಗದೆ ಮೃತಪಟ್ಟಿರಬಹುದೇ ಎಂಬ ಸಂಶಯ ವ್ಯಕ್ತವಾಗಿದೆ.

ಆದರೆ, ಕೆರೆಯಲ್ಲಿ ಮೀನು ಸಾಕಣೆ ಮಾಡಿ ಮಾರಾಟ ಮಾಡುತ್ತಿದ್ದ ಮೀನುಗಾರರು ಕಿಡಿಗೇಡಿಗಳು ವಿಷ ಹಾಕಿ ಮೀನುಗಳನ್ನು ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸೂಕ್ತ ತನಿಖೆಯಿಂದಷ್ಟೇ ಮೀನುಗಳ ಸಾವಿನ ಸತ್ಯಾಂಶ ಬಯಲಾಗಬೇಕಿದೆ.

120ಕ್ಕೂ ಹೆಚ್ಚು ಕುಟುಂಬಗಳು ಈ ಕೆರೆಯ ಮೀನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದವು. ಈಗ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಅಧಿಕಾರಿಗಳ ಭೇಟಿ, ಪರಿಶೀಲನೆ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಜೇಶ್ವರ್, ಮೀನುಗಾರಿಕೆ ಸಹಾಯಕರಾದ ಶ್ರೀನಿವಾಸ, ಉಮೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕೆರೆಯ ದಡದಲ್ಲಿರುವ ಮೃತ ಮೀನುಗಳನ್ನು ತೆರವು ಮಾಡುವಂತೆ ಮೀನುಗಾರರಿಗೆ ಸೂಚಿಸಲಾಗಿದೆ. ವಿಷ ಪ್ರಾಶನವಾಗಿದ್ದರೆ ಎಲ್ಲ ಜಾತಿಯ ಮೀನುಗಳ ಸಾಯಬೇಕಿತ್ತು. ಜಿಲೇಜಿ ಜಾತಿಯ ಮೀನುಗಳು ಮಾತ್ರ ಸತ್ತಿವೆ. ಕಾಟ್ಲಾ, ಸಾಮಾನ್ಯ ಜಂಡೆ, ರೋವೋ, ಮಿರ್ಗಾಲ್ ಜಾತಿಯ ಮೀನುಗಳು ಮೃತಪಟ್ಟಿಲ್ಲ ಎಂದು ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೊಸ ನೀರು ಬಂದಿದ್ದರಿಂದ ಹೊಂದಿಕೊಳ್ಳಲಾರದೆ ಸಾವನ್ನಪ್ಪಿರಬಹುದು. ನೀರಿನ ಮಾದರಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ ನಂತರ ಸತ್ಯಾಂಶ ತಿಳಿದುಬರಲಿದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

1 hour ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

4 hours ago