Tiger skin
ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ಕಾವೇರಿ ವನ್ಯಜೀವಿಧಾಮದ ಕಂಪಾರ್ಟ್ಮೆಂಟ್ ೪೦ರ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತಿನ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಸರ್ವೆ ನಂ.೪೪೨/೨ರ ಜಮೀನಿನಲ್ಲಿ ಒಂದು ಜಿಂಕೆಯನ್ನು ಬೇಟೆಯಾಡಿ, ಅದರ ದೇಹವನ್ನು ತುಂಡರಿಸಿ ಮಾಂಸವನ್ನಾಗಿ ಮಾರ್ಪಡಿಸಿ ಜಿಂಕೆಯ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ, ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವ್ಯಕ್ತಿಯನ್ನು ಗುರುತಿಸಿ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್ರವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗೋಪಾ ಪ್ರಕರಣ ದಾಖಲು ಮಾಡಿದ್ದಾರೆ.
ಜಿಂಕೆ ಬೇಟೆಯಾಡಿ ಹತ್ಯೆ ಮಾಡಿರುವ ಆರೋಪಿ ನಾಗರಾಜು ಪತ್ತೆಗಾಗಿ ಈಗಾಗಲೇ ವಿಶೇಷ ತಂಡ ರಚನೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕ ಅನಿಲ್ ಕುಮಾರ್, ಶಿವರಾಜ್ ಪಾಲ್ಗೊಂಡಿದ್ದರು.
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…
ಮಹಾದೇಶ್ ಎಂ ಗೌಡ ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…
ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…