Tiger skin
ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ಕಾವೇರಿ ವನ್ಯಜೀವಿಧಾಮದ ಕಂಪಾರ್ಟ್ಮೆಂಟ್ ೪೦ರ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತಿನ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಸರ್ವೆ ನಂ.೪೪೨/೨ರ ಜಮೀನಿನಲ್ಲಿ ಒಂದು ಜಿಂಕೆಯನ್ನು ಬೇಟೆಯಾಡಿ, ಅದರ ದೇಹವನ್ನು ತುಂಡರಿಸಿ ಮಾಂಸವನ್ನಾಗಿ ಮಾರ್ಪಡಿಸಿ ಜಿಂಕೆಯ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ, ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವ್ಯಕ್ತಿಯನ್ನು ಗುರುತಿಸಿ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್ರವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗೋಪಾ ಪ್ರಕರಣ ದಾಖಲು ಮಾಡಿದ್ದಾರೆ.
ಜಿಂಕೆ ಬೇಟೆಯಾಡಿ ಹತ್ಯೆ ಮಾಡಿರುವ ಆರೋಪಿ ನಾಗರಾಜು ಪತ್ತೆಗಾಗಿ ಈಗಾಗಲೇ ವಿಶೇಷ ತಂಡ ರಚನೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕ ಅನಿಲ್ ಕುಮಾರ್, ಶಿವರಾಜ್ ಪಾಲ್ಗೊಂಡಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…