Tiger skin
ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ಕಾವೇರಿ ವನ್ಯಜೀವಿಧಾಮದ ಕಂಪಾರ್ಟ್ಮೆಂಟ್ ೪೦ರ ಹನೂರು ವನ್ಯಜೀವಿ ವಲಯ ಶಾಗ್ಯ ಶಾಖೆಯ ಎಲ್ಲೇಮಾಳ ಗಸ್ತಿನ ವ್ಯಾಪ್ತಿಯ ಅಜ್ಜೀಪುರ ಗ್ರಾಮದ ಸರ್ವೆ ನಂ.೪೪೨/೨ರ ಜಮೀನಿನಲ್ಲಿ ಒಂದು ಜಿಂಕೆಯನ್ನು ಬೇಟೆಯಾಡಿ, ಅದರ ದೇಹವನ್ನು ತುಂಡರಿಸಿ ಮಾಂಸವನ್ನಾಗಿ ಮಾರ್ಪಡಿಸಿ ಜಿಂಕೆಯ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ, ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ವ್ಯಕ್ತಿಯನ್ನು ಗುರುತಿಸಿ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ನಿರಂಜನ್ರವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗೋಪಾ ಪ್ರಕರಣ ದಾಖಲು ಮಾಡಿದ್ದಾರೆ.
ಜಿಂಕೆ ಬೇಟೆಯಾಡಿ ಹತ್ಯೆ ಮಾಡಿರುವ ಆರೋಪಿ ನಾಗರಾಜು ಪತ್ತೆಗಾಗಿ ಈಗಾಗಲೇ ವಿಶೇಷ ತಂಡ ರಚನೆ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕ ಅನಿಲ್ ಕುಮಾರ್, ಶಿವರಾಜ್ ಪಾಲ್ಗೊಂಡಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…