Mysore
27
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಓಂಕಾರ್ ಅರಣ್ಯ ವಲಯದ ಕುರುಬರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಡಿನಿಂದ ದಾರಿತಪ್ಪಿ ಬಂದಿದ್ದ ಜಿಂಕೆಯೊಂದು ಗ್ರಾಮದ ಹರೀಶ್ ಬಿನ್ ಸಿದ್ದಮಲ್ಲಪ್ಪ ಎಂಬುವವರ ಮನೆಯ ಒಳಗೆ ನುಗ್ಗಿತ್ತು.

ತಕ್ಷಣ ಮನೆಯವರು ಜಿಂಕೆಯನ್ನು ಹಿಡಿದು ಹಗ್ಗದ ಮೂಲಕ ಕಂಬಕ್ಕೆ ಕಟ್ಟಿದರು. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಿಂಕೆಯನ್ನು ಹಿಡಿದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.

 

 

Tags:
error: Content is protected !!