ಚಾಮರಾಜನಗರ

ಹುಲಿ ದಾಳಿಗೆ ಜಿಂಕೆ ಬಲಿ; ಮತ್ತೊಂದೆಡೆ ಚಿರತೆ ಮರಿ ಪತ್ತೆ

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.

ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್‌ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್‌ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್‌ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.

ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರ್ಕಾರ ಆದೇಶ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…

15 mins ago

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…

52 mins ago

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

1 hour ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

1 hour ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

2 hours ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

3 hours ago