ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.
ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.
ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…
ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…