ಚಾಮರಾಜನಗರ

ಹುಲಿ ದಾಳಿಗೆ ಜಿಂಕೆ ಬಲಿ; ಮತ್ತೊಂದೆಡೆ ಚಿರತೆ ಮರಿ ಪತ್ತೆ

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.

ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್‌ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್‌ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್‌ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.

ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

3 mins ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

13 mins ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

23 mins ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

29 mins ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

10 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

11 hours ago