ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.
ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.
ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…