ಚಾಮರಾಜನಗರ

ಹುಲಿ ದಾಳಿಗೆ ಜಿಂಕೆ ಬಲಿ; ಮತ್ತೊಂದೆಡೆ ಚಿರತೆ ಮರಿ ಪತ್ತೆ

ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.

ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್‌ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್‌ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್‌ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.

ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

5 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

11 hours ago