ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.
ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.
ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…