ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ.
ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಇದನ್ನ ಕಂಡ ಸ್ಥಳೀಯರು ಕೂಗಿಕೊಂಡಿದ್ದು, ಪರಿಣಾಮ ಜಿಂಕೆಯನ್ನು ಅಲ್ಲೆ ಬಿಟ್ಟು ಹುಲಿ ಪರಾರಿಯಾಗಿದೆ. ಹುಲಿ ದಾಳಿಗೆ ಸಿಲುಕಿದ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಚಿರತೆ ಮರಿ ಪತ್ತೆ
ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಕಬ್ಬಿನ ಗದ್ದೆಯಲ್ಲಿ ಜಿರತೆಯೊಂದು ತನ್ನ ಮರಿ ಬಿಟ್ಟು ಹೋಗಿದೆ. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆ ಇದ್ದು, ಮರಿಗಾಗಿ ವಾಪಸ್ ಬರಲಿದೆ ಎಂದು ಅರಣ್ಯ ಇಲಾಖೆ ಸ್ಥಳದಲ್ಲಿ ಬೋನಿರಿಸಿದೆ. ಚಿರತೆ ಸೆರೆ ಕಾರ್ಯಚರಣೆ ಮುಂದುವರೆದಿದೆ.
ಜಮೀನಿಗೆ ತೆರಳಲು ಗ್ರಾಮಸ್ಥರ ಹಿಂದೇಟು
ಪಡಗೂರು ಗ್ರಾಮ ಒಂದರಲ್ಲೇ ಜಿಂಕೆ ಮೇಲೆ ಹುಲಿ ದಾಳಿ ಹಾಗೂ ಚಿರತೆ ಇರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಪರಿಣಾಮ ಗ್ರಾಮದ ಸುತ್ತಮುತ್ತಲಿನ ಜನರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…