ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ.
ನಗರದಲ್ಲಿ ಬೆಳೆಯುವ ಎಳನೀರು, ತೆಂಗಿನಕಾಯಿಯನ್ನು ಹೊರ ರಾಜ್ಯಗಳಿಗೆ ಪೂರೈಸಲಾಗುತ್ತದೆ. ಹಾಗಾಗಿ ಆ ಪೂರೈಕೆ ಸರ್ಕಾರದ ಮೂಲಕವೇ ಆಗಲಿ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂಬ ಒತ್ತಾಯ ಕೇಳಿ ಬಂದಿದೆ.
ಚಾಮರಾಜನಗರದ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಬೇಕು. ಈ ಎಪಿಎಂಸಿ ಮಾರುಕಟ್ಟೆ ವಿಶಾಲವಾಗಿದ್ದು, ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಿದರೆ ಜಿಲ್ಲೆಯ ತೆಂಗು ಬೆಳೆಗಾರರು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಲಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಿದರೆ ಅನ್ನದಾತರಿಗೆ ಅಧಿಕ ಲಾಭವೂ ಹೆಚ್ಚಾಗಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಮತ್ತೆ ಉತ್ತಮ ಸ್ಥಿತಿಯಲ್ಲಿದ್ದು, ಜಿಲ್ಲೆಯಲ್ಲಿರುವ ತೆಂಗಿನ ತೋಟಗಳಿಂದ ಎಳನೀರು ಉತ್ತಮ ಇಳುವರಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ತೆಂಗಿನ ಮಾರುಕಟ್ಟೆ ಸ್ಥಾಪನೆಯಾದರೆ ಅನ್ನದಾತರಿಗೆ ತೀವ್ರ ಅನುಕೂಲವಾಗಲಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…