ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ.
ನಗರದಲ್ಲಿ ಬೆಳೆಯುವ ಎಳನೀರು, ತೆಂಗಿನಕಾಯಿಯನ್ನು ಹೊರ ರಾಜ್ಯಗಳಿಗೆ ಪೂರೈಸಲಾಗುತ್ತದೆ. ಹಾಗಾಗಿ ಆ ಪೂರೈಕೆ ಸರ್ಕಾರದ ಮೂಲಕವೇ ಆಗಲಿ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂಬ ಒತ್ತಾಯ ಕೇಳಿ ಬಂದಿದೆ.
ಚಾಮರಾಜನಗರದ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಬೇಕು. ಈ ಎಪಿಎಂಸಿ ಮಾರುಕಟ್ಟೆ ವಿಶಾಲವಾಗಿದ್ದು, ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಿದರೆ ಜಿಲ್ಲೆಯ ತೆಂಗು ಬೆಳೆಗಾರರು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಲಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಿದರೆ ಅನ್ನದಾತರಿಗೆ ಅಧಿಕ ಲಾಭವೂ ಹೆಚ್ಚಾಗಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಮತ್ತೆ ಉತ್ತಮ ಸ್ಥಿತಿಯಲ್ಲಿದ್ದು, ಜಿಲ್ಲೆಯಲ್ಲಿರುವ ತೆಂಗಿನ ತೋಟಗಳಿಂದ ಎಳನೀರು ಉತ್ತಮ ಇಳುವರಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ತೆಂಗಿನ ಮಾರುಕಟ್ಟೆ ಸ್ಥಾಪನೆಯಾದರೆ ಅನ್ನದಾತರಿಗೆ ತೀವ್ರ ಅನುಕೂಲವಾಗಲಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…