ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ.
ನಗರದಲ್ಲಿ ಬೆಳೆಯುವ ಎಳನೀರು, ತೆಂಗಿನಕಾಯಿಯನ್ನು ಹೊರ ರಾಜ್ಯಗಳಿಗೆ ಪೂರೈಸಲಾಗುತ್ತದೆ. ಹಾಗಾಗಿ ಆ ಪೂರೈಕೆ ಸರ್ಕಾರದ ಮೂಲಕವೇ ಆಗಲಿ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂಬ ಒತ್ತಾಯ ಕೇಳಿ ಬಂದಿದೆ.
ಚಾಮರಾಜನಗರದ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಬೇಕು. ಈ ಎಪಿಎಂಸಿ ಮಾರುಕಟ್ಟೆ ವಿಶಾಲವಾಗಿದ್ದು, ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಿದರೆ ಜಿಲ್ಲೆಯ ತೆಂಗು ಬೆಳೆಗಾರರು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಲಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಿದರೆ ಅನ್ನದಾತರಿಗೆ ಅಧಿಕ ಲಾಭವೂ ಹೆಚ್ಚಾಗಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಮತ್ತೆ ಉತ್ತಮ ಸ್ಥಿತಿಯಲ್ಲಿದ್ದು, ಜಿಲ್ಲೆಯಲ್ಲಿರುವ ತೆಂಗಿನ ತೋಟಗಳಿಂದ ಎಳನೀರು ಉತ್ತಮ ಇಳುವರಿ ಬರುತ್ತಿದೆ.
ಈ ಹಿನ್ನೆಲೆಯಲ್ಲಿ ತೆಂಗಿನ ಮಾರುಕಟ್ಟೆ ಸ್ಥಾಪನೆಯಾದರೆ ಅನ್ನದಾತರಿಗೆ ತೀವ್ರ ಅನುಕೂಲವಾಗಲಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…