ಚಾಮರಾಜನಗರ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆಗೆ ಬೇಡಿಕೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ.

ನಗರದಲ್ಲಿ ಬೆಳೆಯುವ ಎಳನೀರು, ತೆಂಗಿನಕಾಯಿಯನ್ನು ಹೊರ ರಾಜ್ಯಗಳಿಗೆ ಪೂರೈಸಲಾಗುತ್ತದೆ. ಹಾಗಾಗಿ ಆ ಪೂರೈಕೆ ಸರ್ಕಾರದ ಮೂಲಕವೇ ಆಗಲಿ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂಬ ಒತ್ತಾಯ ಕೇಳಿ ಬಂದಿದೆ.

ಚಾಮರಾಜನಗರದ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಬೇಕು. ಈ ಎಪಿಎಂಸಿ ಮಾರುಕಟ್ಟೆ ವಿಶಾಲವಾಗಿದ್ದು, ಎಳನೀರು ಮಾರುಕಟ್ಟೆಯನ್ನು ಸ್ಥಾಪಿಸಿದರೆ ಜಿಲ್ಲೆಯ ತೆಂಗು ಬೆಳೆಗಾರರು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಲಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಿದರೆ ಅನ್ನದಾತರಿಗೆ ಅಧಿಕ ಲಾಭವೂ ಹೆಚ್ಚಾಗಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಮತ್ತೆ ಉತ್ತಮ ಸ್ಥಿತಿಯಲ್ಲಿದ್ದು, ಜಿಲ್ಲೆಯಲ್ಲಿರುವ ತೆಂಗಿನ ತೋಟಗಳಿಂದ ಎಳನೀರು ಉತ್ತಮ ಇಳುವರಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ತೆಂಗಿನ  ಮಾರುಕಟ್ಟೆ ಸ್ಥಾಪನೆಯಾದರೆ ಅನ್ನದಾತರಿಗೆ ತೀವ್ರ ಅನುಕೂಲವಾಗಲಿದ್ದು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 mins ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 mins ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 mins ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 mins ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

28 mins ago