ಹನೂರು : ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ ಮೇಡು ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮಾರ್ಟಿಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಮೇಡು ಗ್ರಾಮದಲ್ಲಿ ೬೫ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ನಾಲ್ಕು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಪರಿತಪಿಸುವಂತಾಗಿದೆ. ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಸಾಧ್ಯವಾಗದೆ ಕುಡಿಯುವ ನೀರು, ಸಂಗ್ರಹ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯನ್ನು ಖಂಡಿಸಿ ರಸ್ತೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.
ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್ ಮಾತನಾಡಿ, ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ ರೋಡ್ ಗ್ರಾಮದಿಂದ ಒಡಕೆಹಳ್ಳ ಗ್ರಾಮದವರೆಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಭಾಗದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ಒಂದು ಸಾವಿರಕ್ಕೂ ಹೆಚ್ಚು ಅಡಿ ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಏತ ನೀರಾವರಿಯ ಮೂಲಕ ನಮ್ಮ ಗ್ರಾಮಗಳ ಕೆರೆ-ಕಟ್ಟೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಿದರೆ ಶಾಶ್ವತ ಪರಿಹಾರ ಸಿಗಲಿದೆ. ಇನ್ನು ಮುಂದಾದರೂ ಸರ್ಕಾರ ಶಾಶ್ವತ ಪರಿಹಾರ ಕೊಡಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:-ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ
ಪ್ರತಿಭಟನೆ ಸ್ಥಳಕ್ಕೆ ಪಿಡಿಒ ಚೆನ್ನೇಶ್ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿ, ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಬಾರದಿರುವುದರಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇಂದಿನಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…