ಚಾಮರಾಜನಗರ

ರಾಜ್ಯದಲ್ಲಿ ಆನ್‌ಲೈನ್ ಜೂಜಾಟ ನಿಷೇಧಿಸಲು ಒತ್ತಾಯ

ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು.

ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ ಸಂಸತ್‌ನಲ್ಲಿ ತಿಳಿಸಿದೆ. ಹಾಗಾಗಿ ಆನ್‌ಲೈನ್ ಜೂಜಾಟ ಆಪ್ ಸಂಬಂಧ ಸೆಕ್ಷನ್ ೧೧೨ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಮೂಲಕ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಆನ್‌ಲೈನ್ ಜೂಜಾಟ ಆಡಲು ಪ್ರಚೋದನೆ ನೀಡುವವರ ವಿರುದ್ಧವೂ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಹೊರಡಿಸಬೇಕು. ಆನ್‌ಲೈನ್ ಜೂಜಾಟ ನಿಷೇಧ ಆದೇಶ ಹೊರಡಿಸದಿದ್ದರೆ ಮಾ.೨೮ ರಂದು ಚಾ.ನಗರದ ಜಿಲ್ಲಾಡಳಿತ ಭವನ, ಎಸ್ಪಿ ಕಚೇರಿ, ಪೊಲೀಸ್ ಠಾಣೆಗಳ ಮುಂದೆ ಇಸ್ಪೀಟ್ ಆಡಿಸುವುದಾಗಿ ಎಚ್ಚರಿಕೆ ನೀಡಿ ಗಡವು ನೀಡಿದ್ದೆವು ಎಂದರು.

ಆದರೆ, ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ನಿಷೇಧದ ವಿವೇಚನೆಯ ನಿರ್ಧಾರಕ್ಕೆ ಸೂಚನೆ ನೀಡಿರುವುದರಿಂದ ಆದೇಶ ನೀಡಿರುವುದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಆನ್‌ಲೈನ್ ಜೂಜಾಟದ ವಿರುದ್ಧ ಕ್ರಮ ವಹಿಸದಿದ್ದರೆ, ಏ.೬ ರಂದು ರೈತ ಸಂಘ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ರೈತ ಮುಖಂಡರಾದ ಮಹೇಶ್, ಮಹಾದೇವಸ್ವಾಮಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago