ಚಾಮರಾಜನಗರ: ರಾಜ್ಯದಲ್ಲಿ ಆನ್ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು.
ಆನ್ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ ಸಂಸತ್ನಲ್ಲಿ ತಿಳಿಸಿದೆ. ಹಾಗಾಗಿ ಆನ್ಲೈನ್ ಜೂಜಾಟ ಆಪ್ ಸಂಬಂಧ ಸೆಕ್ಷನ್ ೧೧೨ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಮೂಲಕ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಆನ್ಲೈನ್ ಜೂಜಾಟ ಆಡಲು ಪ್ರಚೋದನೆ ನೀಡುವವರ ವಿರುದ್ಧವೂ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಹೊರಡಿಸಬೇಕು. ಆನ್ಲೈನ್ ಜೂಜಾಟ ನಿಷೇಧ ಆದೇಶ ಹೊರಡಿಸದಿದ್ದರೆ ಮಾ.೨೮ ರಂದು ಚಾ.ನಗರದ ಜಿಲ್ಲಾಡಳಿತ ಭವನ, ಎಸ್ಪಿ ಕಚೇರಿ, ಪೊಲೀಸ್ ಠಾಣೆಗಳ ಮುಂದೆ ಇಸ್ಪೀಟ್ ಆಡಿಸುವುದಾಗಿ ಎಚ್ಚರಿಕೆ ನೀಡಿ ಗಡವು ನೀಡಿದ್ದೆವು ಎಂದರು.
ಆದರೆ, ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ನಿಷೇಧದ ವಿವೇಚನೆಯ ನಿರ್ಧಾರಕ್ಕೆ ಸೂಚನೆ ನೀಡಿರುವುದರಿಂದ ಆದೇಶ ನೀಡಿರುವುದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಆನ್ಲೈನ್ ಜೂಜಾಟದ ವಿರುದ್ಧ ಕ್ರಮ ವಹಿಸದಿದ್ದರೆ, ಏ.೬ ರಂದು ರೈತ ಸಂಘ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ರೈತ ಮುಖಂಡರಾದ ಮಹೇಶ್, ಮಹಾದೇವಸ್ವಾಮಿ ಹಾಜರಿದ್ದರು.
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…