ಚಾಮರಾಜನಗರ

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.

ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.

ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಹೊಗೆನೆಕಲ್‌ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.

andolanait

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

31 mins ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

33 mins ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

35 mins ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

38 mins ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

41 mins ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

48 mins ago