ಚಾಮರಾಜನಗರ

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.

ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.

ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಹೊಗೆನೆಕಲ್‌ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

1 hour ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

2 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

2 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

2 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

2 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

2 hours ago