ಚಾಮರಾಜನಗರ

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.

ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.

ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಹೊಗೆನೆಕಲ್‌ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.

andolanait

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago