ಚಾಮರಾಜನಗರ

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಪ್ರತಿನಿತ್ಯ ಹಾಗೂ ವಾರದ ಕೊನೆ ಹಾಗೂ ವಿಶೇಷ ದಿನಗಳಲ್ಲಿ ಹೆಚ್ಚಾಗಿ ಆಗಮಿಸುವ ಪ್ರವಾಸಿಗರು ತೆಪ್ಪದಲ್ಲಿ ತೆರಳಿ ಜಲಪಾತವನ್ನು ಕಣ್ಣುಂಬಿಕೊಳ್ಳುತ್ತಾರೆ.

ತೆಪ್ಪದ ದರ ಪರಿಷ್ಕರಣೆಯಾಗಿ ಹಲವು ವರ್ಷಗಳಾಗಿವೆ. ತಮಿಳುನಾಡಿನಲ್ಲಿ ನಾಲ್ಕು ಜನರಿಗೆ 1,500 ನಿಗದಿಪಡಿಸಲಾಗಿದೆ. ನಮ್ಮಲ್ಲಿ 500 ಮಾತ್ರ ನಿಗಧಿಯಾಗಿದೆ.. ಅದನ್ನು ಜಾಸ್ತಿ ಮಾಡಬೇಕು’ ಎಂದು ತೆಪ್ಪ ನಿರ್ವಾಹಕರು ಒತ್ತಾಯಿಸುತ್ತಿದ್ದಾರೆ.

ಸದ್ಯ ಒಬ್ಬರಿಗೆ 125 ನಿಗದಿ ಪಡಿಸಲಾಗಿದೆ. ಒಂದು ತೆಪ್ಪದಲ್ಲಿ ನಾಲ್ಕು ಜನರಿಗಷ್ಟೇ ತೆರಳಲು ಅವಕಾಶ. ತೆಪ್ಪ ನಡೆಸುವವರ ಜೀವನಕ್ಕಾಗಿ ಶುಲ್ಕ ಹೆಚ್ಚು ಮಾಡಬೇಕೆಂದು ಒತ್ತಾಯಿಸಿ, ಈ ಸಂಬಂಧ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿಯನ್ನು ಸಲ್ಲಿಸಿದ್ದಾರೆ.

ಇನ್ನೂ ಹೊಗೆನೆಕಲ್‌ ನಲ್ಲಿ ತೆಪ್ಪದಲ್ಲಿ ತೆರಳುವವರಿಗೆ ಸುರಕ್ಷಾ ಕವಚ ನೀಡುತ್ತಿಲ್ಲ. ಒಂದು ತೆಪ್ಪದಲ್ಲಿ ನಾಲ್ಕಕ್ಕಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗುತ್ತಾರೆ. ಇದರ ಬೆನ್ನಲ್ಲೇ ಎಲ್ಲರಿಗೂ ರಕ್ಷಾ ಕವಚ ನೀಡುವುದಿಲ್ಲ. ರಕ್ಷಾ ಕವಚಗಳು ಹಳೆಯದಾಗಿವೆ. ಹಣದ ಆಸೆಗೆ ಹೆಚ್ಚೆಚ್ಚು ಜನರನ್ನು ಒಮ್ಮೆಲೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಪ್ರವಾಸಿಗರು ಆರೋಪಿಸುತ್ತಾರೆ.

andolanait

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

58 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago